
ಕೊಪ್ಪಳದಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಜಾಲ ಪತ್ತೆಯಾಗಿದೆ.
ಅಕ್ರಮವಾಗಿ ಹಣ ಡ್ರಾ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ದುರುಪಯೋಗವಾಗಿರುವ ಬ್ಯಾಂಕ್ ಖಾತೆಗಳನ್ನು ತಕ್ಷಣವೇ ಸೀಜ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಕ್ರಮದ ಕುರಿತು ತನಿಖೆ ಚುರುಕುಗೊಂಡಿದೆ.