
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರ್ಕಾರವು ಈ ಆದೇಶವನ್ನು ನ್ಯಾಯಸಮ್ಮತವಲ್ಲ ಎಂದು ಪರಿಗಣಿಸಿದ್ದು, ಕಾನೂನು ತಂಡ ಮತ್ತು ಅಡ್ವೊಕೇಟ್ ಜನರಲ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಸೂಚನೆ ನೀಡಿದೆ.
ತಾಂತ್ರಿಕ ಮತ್ತು ಕಾನೂನು ತಂಡಗಳು ಚರ್ಚೆಯಲ್ಲಿ ತೊಡಗಿದ್ದು, ಶೀಘ್ರದಲ್ಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.