
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಇಂದಿರಾ ನಗರದಲ್ಲಿ ಶನಿವಾರ ತಡರಾತ್ರಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ್ (35), ಪತ್ನಿ ನಾಗವೇಣಿ (28) ಮತ್ತು 3 ವರ್ಷದ ಮಗ ಸಂತೋಷ್ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಿಂದ ಕೆಲಸ ಅರಸಿ ಬಂದಿದ್ದ ಈ ಕುಟುಂಬವು ಗುಡ್ಡದ ಕೆಳಗೆ ಶೆಡ್ ಹಾಕಿಕೊಂಡು ವಾಸಿಸುತ್ತಿತ್ತು.