
ವಾಲ್ಮೀಕಿ ನಿಗಮದ ಹಗರಣದ ಆರೋಪಿ ನಾಗೇಂದ್ರ ರಾಜೀನಾಮೆ ನೀಡಿದ ನಂತರವೂ ಪಾದಯಾತ್ರೆ ನಡೆಸುವ ಬಗ್ಗೆ ಬಿಜೆಪಿ ನಾಯಕರಲ್ಲಿ ಗೊಂದಲ ಉಂಟಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸೆಪ್ಟೆಂಬರ್ 1ರಿಂದ 10ರವರೆಗೆ ಬರ ಮತ್ತು ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯಗಳನ್ನಿಟ್ಟುಕೊಂಡು ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ್ದಾರೆ.
ಪಾದಯಾತ್ರೆ ಬಗ್ಗೆ ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ತಾವು ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.