
ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ 160 ಮಂದಿ ಮೃತಪಟ್ಟಿದ್ದು, ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ 300 ಭಾರತೀಯರು ಸೇರಿದಂತೆ 500 ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೊಬೈಲ್ ಟವರ್ಗಳು ಕೊಚ್ಚಿಹೋಗಿ ಸಂಪರ್ಕ ಕಡಿತಗೊಂಡಿದ್ದು, ಯಾತ್ರಿಕರ ಪತ್ತೆಗಾಗಿ ನೇಪಾಳ ಸೇನೆಯು ಉಪಗ್ರಹ ಫೋನ್ಗಳನ್ನು ಬಳಸುತ್ತಿದೆ ಎಂದು ವಿದೇಶಾಂಗ ಸಚಿವ ಶಿಶಿರ್ ಖನಾಲ್ ತಿಳಿಸಿದ್ದಾರೆ.
ಭಾರತ ಸರ್ಕಾರವು ಈಗಾಗಲೇ 10 ಟನ್ ತುರ್ತು ಪರಿಹಾರ ಸಾಮಗ್ರಿ ಮತ್ತು ವೈದ್ಯಕೀಯ ನೆರವನ್ನು ರವಾನಿಸಿದ್ದು, ನೇಪಾಳ ಸರ್ಕಾರವು ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದೆ.