
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಸಾಮಾಜಿಕ ಮಾಧ್ಯಮಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಹಿಂದೆ ಅಕ್ರಮದಲ್ಲಿ ಭಾಗಿಯಾದವರು ಮತ್ತು ಬೇಲ್ ಮೇಲೆ ಇರುವವರ ಚಲನವಲನಗಳ ಮೇಲೆ ಕಣ್ಗಾವಲು ಇರಿಸಲಾಗಿದ್ದು, ಕೋಚಿಂಗ್ ಸೆಂಟರ್ಗಳಿಗೂ ಎಚ್ಚರಿಕೆ ನೀಡಲಾಗಿದೆ.
ಗೈರುಹಾಜರಾದ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆ ಮುಗಿಯಲು ಕೇವಲ 5 ನಿಮಿಷ ಬಾಕಿ ಇರುವಾಗ ಮಾತ್ರ ಮುಟ್ಟಬೇಕು ಎಂಬ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ.