
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಹೋರಾಟ ನಡೆಸಲು ನಿರ್ಧರಿಸಿದ್ದು, ಶನಿವಾರ ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಪಾದಯಾತ್ರೆಯ ರೂಪುರೇಷೆ ಅಂತಿಮಗೊಳಿಸಲಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆರ್.ಅಶೋಕ್, ಬಸವರಾಜ ಬೊಮ್ಮಾಯಿ ಮತ್ತು ಪಿ.ಸಿ.ಮೋಹನ್ ಭೇಟಿಯಾಗಿ, ಆಗಸ್ಟ್ 13 ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಲು ಚರ್ಚಿಸಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಯೋಜನೆಯನ್ನು ಸಂಪೂರ್ಣವಾಗಿ ವಾಪಸ್ ಪಡೆಯುವವರೆಗೆ ರೈತರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿವೆ.