
ಬೆಂಗಳೂರಿನ ಶರತ್ ಅಶೋಕ್ ಅವರು ಅಂಡಮಾನ್ ಮತ್ತು ನಿಕೋಬಾರ್ನ ಸ್ವರಾಜ್ ದ್ವೀಪದಲ್ಲಿ 2,400 ಚದರ ಮೀಟರ್ ವಿಸ್ತೀರ್ಣದ ಬೃಹತ್ ಧ್ವಜವನ್ನು ಸಮುದ್ರದ ನೀರಿನಲ್ಲಿ ಅನಾವರಣಗೊಳಿಸಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
2026ರ ಮೇ 2ರಂದು ಸುಮಾರು 200 ಸ್ಕೂಬಾ ಡೈವರ್ಗಳ ತಂಡವು ಭಾರತೀಯ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆಯ ನೆರವಿನೊಂದಿಗೆ ಈ ಸಾಧನೆ ಮಾಡಿದೆ.
ಈ ಐತಿಹಾಸಿಕ ಸಾಧನೆಗಾಗಿ ಅಂಡಮಾನ್ ಮತ್ತು ನಿಕೋಬಾರ್ನ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ.ಜೋಶಿ ಅವರು ಶರತ್ ಅಶೋಕ್ ಅವರಿಗೆ ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣ ಪತ್ರ ನೀಡಿ ಸನ್ಮಾನಿಸಿದ್ದಾರೆ.