
ದೆಹಲಿಯ ಕೇಶವ್ ಕುಂಜ್ನಲ್ಲಿರುವ ಆರ್ಎಸ್ಎಸ್ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕ ಉದಿತ್ ರಾಜ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನಾಕಾರರು ಮನುಸ್ಮೃತಿಯ ಪ್ರತಿಗಳನ್ನು ಹಾಗೂ ಆರ್ಎಸ್ಎಸ್ನ ಸಮವಸ್ತ್ರಗಳನ್ನು ಸುಟ್ಟುಹಾಕಿ, ದೇಶವು ಸಂವಿಧಾನದ ಪ್ರಕಾರ ನಡೆಯಬೇಕು ಎಂದು ಘೋಷಣೆ ಕೂಗಿದರು.
ಕೇಂದ್ರ ಸರ್ಕಾರ ಮತ್ತು ಆರ್ಎಸ್ಎಸ್ ಸಂವಿಧಾನದ ಬದಲಿಗೆ ಮನುಸ್ಮೃತಿಯ ತತ್ವಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿವೆ ಎಂದು ಉದಿತ್ ರಾಜ್ ಆರೋಪಿಸಿದ್ದಾರೆ.