
ದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಸರ್ಕಾರಿ ನಿವಾಸದಲ್ಲಿ ಪತ್ತೆಯಾದ ನಗದಿಗೆ ಸಂಬಂಧಿಸಿದಂತೆ, ಅವರ ವಿರುದ್ಧದ ಮೂರೂ ಆರೋಪಗಳು ಸಾಬೀತಾಗಿವೆ ಎಂದು ಸಂಸದೀಯ ತನಿಖಾ ಸಮಿತಿ ವರದಿ ನೀಡಿದೆ.
2025ರ ಮಾರ್ಚ್ 14-15ರ ಮಧ್ಯರಾತ್ರಿ ನಡೆದ ಬೆಂಕಿ ಅವಘಡದ ವೇಳೆ, 30 ತುಘಲಕ್ ಕ್ರೆಸೆಂಟ್ ನಿವಾಸದಲ್ಲಿ ಅಪಾರ ಪ್ರಮಾಣದ 500 ರೂಪಾಯಿ ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದವು ಎಂದು ಸಮಿತಿ ದೃಢಪಡಿಸಿದೆ.
ಹಣದ ಮೂಲದ ಬಗ್ಗೆ ಸ್ಪಷ್ಟನೆ ನೀಡದಿರುವುದು, ಸಾಕ್ಷ್ಯ ನಾಶ ಮತ್ತು ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಿದ ಆರೋಪಗಳ ಮೇಲೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ಸಮಿತಿ ಈ ತೀರ್ಮಾನಕ್ಕೆ ಬಂದಿದೆ.