
ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ರೂಪುಗೊಂಡಿರುವುದರಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸೆಪ್ಟೆಂಬರ್ 15ರವರೆಗೆ ಭಾರೀ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಛತ್ತೀಸ್ಗಢ ಹಾಗೂ ನೆರೆಯ ಪ್ರದೇಶಗಳ ಮೇಲಿದ್ದ ವಾಯುಭಾರ ಕುಸಿತ ಮತ್ತು ಚಂಡಮಾರುತದ ಪರಿಚಲನೆಯು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುತ್ತಿರುವುದರಿಂದ ನೈಋತ್ಯ ಮಾನ್ಸೂನ್ ಮತ್ತೆ ಸಕ್ರಿಯಗೊಳ್ಳುತ್ತಿದೆ.
ಗುಜರಾತ್, ಮಹಾರಾಷ್ಟ್ರ, ಕೊಂಕಣ, ಗೋವಾ ಹಾಗೂ ದಕ್ಷಿಣ ಭಾರತದ ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆ ಬೀಳುವ ನಿರೀಕ್ಷೆಯಿದೆ.