
ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆ ಚುರುಕುಗೊಂಡಿದ್ದು, ಕೆಆರ್ಎಸ್ ಡ್ಯಾಂಗೆ 31,122 ಕ್ಯೂಸೆಕ್ ಹಾಗೂ ಆಲಮಟ್ಟಿ ಜಲಾಶಯಕ್ಕೆ 1,40,257 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 103.40 ಅಡಿ ತಲುಪಿದ್ದು, ಆಲಮಟ್ಟಿ ಜಲಾಶಯದ ಮಟ್ಟ 518.89 ಮೀಟರ್ಗೆ ಏರಿಕೆಯಾಗಿ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.
ತುಂಗಭದ್ರಾ ಜಲಾಶಯದಲ್ಲಿ 50 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಾಲುವೆ ದುರಸ್ತಿ ಮಾಡದೆ ನೀರು ಬಿಟ್ಟರೆ ಕಟ್ಟೆಯೊಡೆಯುವ ಭೀತಿಯಲ್ಲಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ರೈತರಿದ್ದಾರೆ.