
ಚಾಮರಾಜನಗರದ ಹನೂರು ಅರಣ್ಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಅವರು ಅಕ್ರಮವಾಗಿ 5 ರಿಂದ 8 ಕಿಲೋಮೀಟರ್ ಒಳಗೆ ಪ್ರವೇಶಿಸಿದ್ದರು ಎಂದು ಸಚಿವ ರಾಮಲಿಂಗಾರೆಡ್ಡಿ ಸದನದಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳದಿಂದ 2 ನಾಡಬಂದೂಕುಗಳು, 20 ರಿಂದ 35 ಕೆಜಿ ಜಿಂಕೆ ಮಾಂಸ ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಿಬ್ಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಮತ್ತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.