
ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಚಾಲಕ ಕುಮಾರ್, ಕಾರು ಚಾಲಕ ರತನ್ ಹಾಗೂ ಸಹ ಪ್ರಯಾಣಿಕ ಆದರ್ಶ್ ಮೃತರು ಎಂದು ಗುರುತಿಸಲಾಗಿದ್ದು, ಈ ಘಟನೆಯಲ್ಲಿ ಒಟ್ಟು 7 ಮಂದಿಗೆ ಗಾಯಗಳಾಗಿವೆ.
ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.