
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಸ್ಕೈರೂಟ್ ಏರೋಸ್ಪೇಸ್ ಮತ್ತು ಅಗ್ನಿಕುಲ್ ಕಾಸ್ಮೋಸ್ ಸೇರಿದಂತೆ 20 ಪ್ರಮುಖ ಬಾಹ್ಯಾಕಾಶ ಸ್ಟಾರ್ಟಪ್ಗಳ ಸಿಇಒಗಳೊಂದಿಗೆ ಸಂವಾದ ನಡೆಸಿದರು.
ಬಾಹ್ಯಾಕಾಶ ತಂತ್ರಜ್ಞಾನವನ್ನು ಕೃಷಿ ಇಳುವರಿ ಹೆಚ್ಚಿಸಲು, ಪರಿಸರ ಸಂರಕ್ಷಣೆಗೆ ಮತ್ತು ಅಟಲ್ ಟಿಂಕರಿಂಗ್ ಲ್ಯಾಬ್ಸ್ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ವಿಸ್ತರಿಸುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ.
ಭಾರತವು ಜಾಗತಿಕ ಬಾಹ್ಯಾಕಾಶ ಹೂಡಿಕೆಗಳ ಕೇಂದ್ರವಾಗಬೇಕೆಂದು ಕರೆ ನೀಡಿದ ಪ್ರಧಾನಿ, ಖಾಸಗಿ ವಲಯದ ಭಾಗವಹಿಸುವಿಕೆಯಿಂದ ದೇಶದಲ್ಲಿ ಹೊಸ ನಾವೀನ್ಯತೆಗಳು ಸೃಷ್ಟಿಯಾಗುತ್ತಿವೆ ಎಂದು ಶ್ಲಾಘಿಸಿದರು.