
ಸರಕು ಸಾಗಣೆ ವಾಹನ ಅಪಘಾತದಲ್ಲಿ ಮೃತಪಟ್ಟ ಕೋಳಿಗಳನ್ನು 'ಜೀವಸಂಪತ್ತು' ಮತ್ತು 'ಸರಕು' ಎಂದು ಪರಿಗಣಿಸಿ ಮಾಲೀಕರಿಗೆ ಪರಿಹಾರ ನೀಡಬೇಕು ಎಂದು ಧಾರವಾಡ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಬಳ್ಳಾರಿಯ ನ್ಯಾಯಾಧಿಕರಣ ನೀಡಿದ್ದ 4,51,000 ರೂಪಾಯಿ ಪರಿಹಾರವನ್ನು ಎತ್ತಿಹಿಡಿದ ನ್ಯಾಯಾಲಯ, ವಿಮಾ ಕಂಪನಿಯು ಪರಿಹಾರ ಪಾವತಿಸಲು ಬಾಧ್ಯಸ್ಥನಾಗಿರುತ್ತದೆ ಎಂದು ಸ್ಪಷ್ಟಪಡಿಸಿ ಬಡ್ಡಿದರವನ್ನು ಶೇ.7ರಿಂದ ಶೇ.6ಕ್ಕೆ ಇಳಿಸಿದೆ.
2013ರ ಜೂನ್ 19ರಂದು ನಡೆದ ಅಪಘಾತದಲ್ಲಿ 2,000ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದವು; ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 2(13)ರ ಅಡಿ ಪ್ರಾಣಿ ಮತ್ತು ಪಕ್ಷಿಗಳು ಸರಕುಗಳ ವ್ಯಾಪ್ತಿಗೆ ಬರುತ್ತವೆ ಎಂದು ನ್ಯಾಯಪೀಠ ತಿಳಿಸಿದೆ.