
ದಾವಣಗೆರೆಯ ಬಂಬೂಬಜಾರ್ ರಸ್ತೆಯಲ್ಲಿ ಮಂಗಳವಾರ ಟಿಪ್ಪರ್ ಲಾರಿಯೊಂದು ಅತಿವೇಗದಿಂದ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ (50) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಟಿಪ್ಪರ್ ಚಾಲಕ ಬ್ರೇಕ್ ಹಾಕದೆ ಬೈಕ್ ಸವಾರನ ಮೇಲೆ ವಾಹನ ಹತ್ತಿಸಿ ಪರಾರಿಯಾಗಿದ್ದು, ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಅವರು ಸಂಚಾರ ನಿಯಮ ಉಲ್ಲಂಘಿಸುವ ಟಿಪ್ಪರ್ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.