
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವುದನ್ನು ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚನೆ ನೀಡಿದೆ.
ತಮಿಳುನಾಡು ಸಲ್ಲಿಸಿದ ಅರ್ಜಿಯಲ್ಲಿ, ಕರ್ನಾಟಕದಿಂದ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿಯುತ್ತಿಲ್ಲ ಮತ್ತು ಈವರೆಗೆ ಕೇವಲ 13ರಿಂದ 14 ಟಿಎಂಸಿ ನೀರು ಮಾತ್ರ ಲಭ್ಯವಾಗಿದೆ ಎಂದು ವಾದಿಸಿದೆ.
ಕರ್ನಾಟಕವು ಈಗಾಗಲೇ 3,500 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ ಎಂದು ತಿಳಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಸೋಮವಾರಕ್ಕೆ ಮುಂದೂಡಿದೆ.