
ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಪಿಸ್ತೂಲಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮುಂಬೈಗೆ ಪ್ರಯಾಣಿಸಲು ಬಂದಿದ್ದ ಕಮಲೇಶ್ ಕೇದರನಾಥ ರೈ ಎಂಬ ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಪಿಸ್ತೂಲಿನ ಮಾಹಿತಿಯನ್ನು ದಾಖಲಿಸಿಕೊಳ್ಳುವ ವೇಳೆ ಈ ಘಟನೆ ನಡೆದಿದ್ದು, ಸಿಬ್ಬಂದಿಯ ಕಾಲು ಮತ್ತು ಹೆಬ್ಬೆರಳಿಗೆ ಗಾಯವಾಗಿದೆ.