
ಗಣೇಶ ಚತುರ್ಥಿ ಹಬ್ಬದ ದಿನದಂದು ಕರ್ನಾಟಕದ ವಿವಿಧೆಡೆ ಸಂಭವಿಸಿದ ಅಗ್ನಿ ದುರಂತ ಹಾಗೂ ರಸ್ತೆ ಅಪಘಾತಗಳಲ್ಲಿ ಒಟ್ಟು 12 ಮಂದಿ ಜೀವ ಕಳೆದುಕೊಂಡಿದ್ದಾರೆ.
ಬೆಳಗಾವಿ ಚಾವ್ಹಾಣ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸಜೀವ ದಹನವಾಗಿದ್ದಾರೆ.
ಸವದತ್ತಿ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.