
ಚಾಮರಾಜನಗರದ ಹನೂರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಎನ್ಕೌಂಟರ್ ಮಾಡಿ ಕೊಂದಿದ್ದು, ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ನ್ಯಾಯಾಂಗ ತನಿಖೆ ನಡೆಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಅರಣ್ಯಾಧಿಕಾರಿಗಳು ಮೃತಪಟ್ಟವರ ಎದೆಗೆ ನೇರವಾಗಿ ಗುಂಡು ಹೊಡೆದಿದ್ದಾರೆ ಮತ್ತು ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಶವಗಳನ್ನು ಮೈಸೂರಿಗೆ ಸಾಗಿಸಿದ್ದಾರೆ ಎಂದು ಅಶೋಕ ಆರೋಪಿಸಿದ್ದಾರೆ.
ಈ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಸಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದು, ತನಿಖೆ ಮುಗಿಯುವವರೆಗೆ ಸಂಬಂಧಪಟ್ಟ ಅರಣ್ಯಾಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ಅಶೋಕ ಆಗ್ರಹಿಸಿದ್ದಾರೆ.