
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಪಾಸ್ ಮಾಡಿದ್ದು ಕಾಂಗ್ರೆಸ್ ಎಂದು ಹೇಳಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರ ಸದ್ಯದಲ್ಲೇ ಬಗೆಹರಿಯಲಿದೆ ಎಂದರು.
ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಂಡ ಅವರು, ನಿಜಲಿಂಗಪ್ಪ ಅವರ ಸರಳತೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದರು.