
ವಿಕಲಚೇತನರ ಪಿಂಚಣಿ ಮಂಜೂರು ಮಾಡಲು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪ ತಹಶೀಲ್ದಾರ್ ಪುಷ್ಪಲತಾ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
2017ರ ಸೆಪ್ಟೆಂಬರ್ 21ರಂದು 5 ಸಾವಿರ ರೂ. ಮುಂಗಡ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದರು.
ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 40 ಸಾವಿರ ರೂ. ದಂಡವನ್ನೂ ವಿಧಿಸಿದೆ.