
ರಾಜ್ಯಸಭೆಯು 'ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ವಿಧೇಯಕ - 2026' ಅನ್ನು ಅಂಗೀಕರಿಸಿದ್ದು, ವಂದೇ ಮಾತರಂ ಗೀತೆಗೆ ರಾಷ್ಟ್ರಗೀತೆಯಷ್ಟೇ ಶಾಸನಬದ್ಧ ರಕ್ಷಣೆ ನೀಡಲಾಗಿದೆ.
ಈ ಹೊಸ ಕಾನೂನಿನ ಅಡಿಯಲ್ಲಿ ವಂದೇ ಮಾತರಂಗೆ ಅವಮಾನ ಮಾಡಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಸೇರಿಸಲಾಗಿದೆ.
ಜುಲೈ 24ರಂದು ಮಂಡಿಸಲಾದ ಈ ಮಸೂದೆಯು ವಂದೇ ಮಾತರಂ ರಚನೆಯಾಗಿ 150 ವರ್ಷಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಅಂಗೀಕಾರಗೊಂಡಿದ್ದು, ವಿಪಕ್ಷಗಳ ಪ್ರತಿಭಟನೆಯ ನಡುವೆ ಧ್ವನಿ ಮತದ ಮೂಲಕ ಪಾಸ್ ಆಗಿದೆ.