
ಮುಖ್ಯಮಂತ್ರಿ ಬದಲಾವಣೆಯು ಪಕ್ಷಕ್ಕೆ ಹಾನಿಕರ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದು, ಸಿದ್ದರಾಮಯ್ಯ ಅವರನ್ನು ಬದಲಿಸಿರುವುದು ಕಾಂಗ್ರೆಸ್ಗೆ ಡ್ಯಾಮೇಜ್ ಆಗಬಹುದು ಎಂದು ಎಚ್ಚರಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಾರ ಸೇರಿದಂತೆ ಕೆಲವು ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲಾವಾರು ಅಸಮತೋಲನ ಆಡಳಿತದ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ.
ತಾವು ಸಚಿವ ಸ್ಥಾನ ಕೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದ ರಾಜಣ್ಣ, ಸಚಿವ ಸ್ಥಾನ ವಂಚಿತ ಶಾಸಕರು ರಾಜೀನಾಮೆ ನೀಡಲು ಮುಂದಾಗಿರುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.