
ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈಶಾನ್ಯ ವಲಯದ ವಿರುದ್ಧ ಪೂರ್ವ ವಲಯ ತಂಡವು 210 ರನ್ಗಳ ಅಂತರದಿಂದ ಗೆದ್ದು ಸೆಮಿಫೈನಲ್ಗೆ ಪ್ರವೇಶಿಸಿದೆ.
ಪೂರ್ವ ವಲಯದ ಶಹಬಾಜ್ ಅಹಮದ್ (167) ಮತ್ತು ಸುದಿಪ್ ಕುಮಾರ್ ಘರಾಮಿ (146) ಅವರ ಶತಕಗಳ ನೆರವಿನಿಂದ ತಂಡವು ಮೊದಲ ಇನಿಂಗ್ಸ್ನಲ್ಲಿ 467 ರನ್ ಗಳಿಸಿತ್ತು.
15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ 3 ಓವರ್ಗಳಲ್ಲಿ 11 ರನ್ ನೀಡಿ 2 ವಿಕೆಟ್ ಪಡೆಯುವ ಮೂಲಕ ಬೌಲಿಂಗ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ.