
ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಿಂದಾಗಿ ಉಜನಿ ಮತ್ತು ವೀರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿದ್ದರಿಂದ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಬಳಿ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಗುರುಸುಣಗಿ ಬ್ಯಾರೇಜ್ನ 24 ಕ್ರಸ್ಟ್ ಗೇಟ್ಗಳ ಪೈಕಿ 23 ಗೇಟ್ಗಳನ್ನು ತೆರೆದು ನದಿಗೆ ಸುಮಾರು 1.20 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದ್ದು, ಕಂಗಳೇಶ್ವರ ಮತ್ತು ವೀರಾಂಜನ ದೇವಸ್ಥಾನಗಳು ಜಲಾವೃತಗೊಂಡಿವೆ.
ನದಿಗೆ ನೀರು ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿ ತೀರಕ್ಕೆ ಸಾರ್ವಜನಿಕರು ಮತ್ತು ಜಾನುವಾರುಗಳು ತೆರಳದಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.