
ತುಮಕೂರು ಜಿಲ್ಲೆಯ ಗುಬ್ಬಿ ವಲಯದ ಪ್ರಾದೇಶಿಕ ಅರಣ್ಯಾಧಿಕಾರಿ ಸತೀಶ್ ಚಂದ್ರ ಮತ್ತು ಹೊರಗುತ್ತಿಗೆ ನೌಕರ ಶೌಕತ್ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ವಶಾಗಿದ್ದಾರೆ.
ಗುಬ್ಬಿ ಅರಣ್ಯ ವಲಯದಲ್ಲಿ ಕಾಮಗಾರಿ ಆರಂಭಿಸುವುದನ್ನು ತಡೆದು ಶೇಕಡಾ 30 ರಷ್ಟು ಅಂದರೆ 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಆರೋಪಿಸಲಾಗಿದೆ.
ಗುತ್ತಿಗೆದಾರ ಶಿವರಾಜ್ ನೀಡಿದ ದೂರಿನ ಮೇರೆಗೆ ಇನ್ಸ್ಪೆಕ್ಟರ್ ಶಾಂತಿನಾಥ್ ನೇತೃತ್ವದಲ್ಲಿ ಗುಬ್ಬಿ ಕಚೇರಿಯಲ್ಲಿ ಈ ದಾಳಿ ನಡೆದಿದೆ.