
ಸಕ್ಕರೆ ದರ ಏರಿಕೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ, ಸಕ್ಕರೆ ದಾಸ್ತಾನು ಕಡಿಮೆಯಾಗಿರುವುದರಿಂದ ಬೆಲೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಜನರು 100 ರೂ. ಕೊಟ್ಟು ನೀರಿನ ಬಾಟಲಿ ಖರೀದಿಸುವಾಗ, 50 ರೂಪಾಯಿ ಕೊಟ್ಟು ಸಕ್ಕರೆ ಖರೀದಿಸುವುದರಲ್ಲಿ ತಪ್ಪೇನಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.
ಸಕ್ಕರೆ ದರ ಹೆಚ್ಚಾಗುವುದು ಕಬ್ಬು ಬೆಳೆಗಾರರಿಗೆ ಅನುಕೂಲಕರವಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಗಮನಹರಿಸಿ ಸಕ್ಕರೆ ಕಾರ್ಖಾನೆಗಳನ್ನು ಹೆಚ್ಚಿಸಬೇಕು ಎಂದು ಸವದಿ ಸಲಹೆ ನೀಡಿದ್ದಾರೆ.