
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶದಿಂದಾಗಿ ಆಗಸ್ಟ್ 13ರವರೆಗೆ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ದೆಹಲಿ, ಹರಿಯಾಣ, ಚಂಡೀಗಢದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಗಸ್ಟ್ 12 ಮತ್ತು 13ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಪ್ರವಾಹ ಮತ್ತು ಹಠಾತ್ ಪ್ರವಾಹದ ಅಪಾಯವಿರುವ ಹಿನ್ನೆಲೆಯಲ್ಲಿ ಬೆಟ್ಟ ಮತ್ತು ಕರಾವಳಿ ಪ್ರದೇಶಗಳಿಗೆ ಪ್ರವಾಸ ಹೋಗುವವರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.