
ನಂದಿಬೆಟ್ಟದಲ್ಲಿ ಆಗಸ್ಟ್ 9ರಂದು ನಡೆಯಲಿರುವ 'ಮಾನ್ಸೂನ್ ಮ್ಯಾರಥಾನ್' ಹಿನ್ನೆಲೆಯಲ್ಲಿ, ಆಗಸ್ಟ್ 8ರ ರಾತ್ರಿ 11 ಗಂಟೆಯಿಂದ ಆಗಸ್ಟ್ 9ರ ಮಧ್ಯಾಹ್ನ 12 ಗಂಟೆಯವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ. ಪ್ರಭು ಅವರು ಈ ಆದೇಶ ಹೊರಡಿಸಿದ್ದು, ಕಾರಹಳ್ಳಿ ಕ್ರಾಸ್ನಿಂದ ನಂದಿಬೆಟ್ಟದವರೆಗೆ ಪಾಸ್ ಹೊಂದಿರುವ ವಾಹನಗಳಿಗೆ ಮಾತ್ರ ಪ್ರವೇಶವಿರುತ್ತದೆ.
ಸುಮಾರು 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿರುವ ಈ ಮ್ಯಾರಥಾನ್ಗೆ ಡಿಸಿಎಂ ಜಿ. ಪರಮೇಶ್ವರ್ ಚಾಲನೆ ನೀಡಲಿದ್ದು, ಪ್ರವಾಸಿಗರು ತಮ್ಮ ವೀಕೆಂಡ್ ಪ್ಲಾನ್ ಬದಲಿಸಿಕೊಳ್ಳುವಂತೆ ಸೂಚಿಸಲಾಗಿದೆ.