
ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಕೋಲಾರ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆಜಿಎಫ್ ತಾಲೂಕಿನ ಹಲವೆಡೆ ಗಣೇಶ ಹಬ್ಬದ ದಿನದಂದು ಉತ್ತಮ ಮಳೆಯಾಗಿದೆ.
ಮುಳಬಾಗಿಲು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಗಾಳಿ ಮತ್ತು ಮಳೆಯ ರಭಸಕ್ಕೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.
ಅಂಬೇಡ್ಕರ್ ನಗರ ಹಾಗೂ ತ್ಯಾಗರಾಜ ಕಾಲೋನಿ ಸೇರಿದಂತೆ ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಸ್ಥಳೀಯ ಆಡಳಿತವು ತುರ್ತು ಪರಿಹಾರ ಕಾರ್ಯ ಕೈಗೊಂಡಿದೆ.