
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕವು ತಮಿಳುನಾಡಿಗೆ ಪ್ರತಿದಿನ 12,000 ಕ್ಯುಸೆಕ್ ನೀರನ್ನು ಮುಂದಿನ 15 ದಿನಗಳ ಕಾಲ ಹರಿಸಬೇಕೆಂದು ಮಂಗಳವಾರ ನಿರ್ದೇಶನ ನೀಡಿದೆ.
ಈ ಅವಧಿಯಲ್ಲಿ ಒಟ್ಟು 15.53 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕಿದ್ದು, ಕೇಂದ್ರ ಜಲ ಆಯೋಗದ ಮುನ್ಸೂಚನೆ ಮತ್ತು ಜಲಾಶಯಗಳ ಒಳಹರಿವನ್ನು ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ.
ಪ್ರಾಧಿಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದ್ದು, ಸುಪ್ರೀಂ ಕೋರ್ಟ್ ಗುರುವಾರ ತಮಿಳುನಾಡಿನ ಅರ್ಜಿಯ ವಿಚಾರಣೆ ನಡೆಸಲಿದೆ.