
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ ದಾಳಿಯಲ್ಲಿ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಮತ್ತು ಪೆನ್ ಡ್ರೈವ್ ಪತ್ತೆಯಾಗಿದೆ.
ಜಪ್ತಿ ಮಾಡಿದ ಸಾಧನಗಳಲ್ಲಿ ಅಶ್ಲೀಲ ವಿಡಿಯೋಗಳು ಮತ್ತು ಆಡಿಯೋ ಸಂಭಾಷಣೆಗಳು ಪತ್ತೆಯಾಗಿದ್ದು, ಈ ಸಂಬಂಧ ಜೈಲು ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಈರಣ್ಣ ರಂಗಾಪುರರನ್ನು ಅಮಾನತುಗೊಳಿಸಲಾಗಿದೆ.
ಪ್ರಜ್ವಲ್ ರೇವಣ್ಣನನ್ನು ವಿಐಪಿ ಸೆಲ್ನಿಂದ ಸಾಮಾನ್ಯ ಸೆಲ್ನತ್ತ ಸ್ಥಳಾಂತರಿಸಲಾಗಿದ್ದು, ಜೈಲು ಎಸ್.ಪಿ ಅನ್ಶುಕುಮಾರ್ಗೆ ಡಿಜಿಪಿ ಅಲೋಕ್ ಕುಮಾರ್ ನೋಟಿಸ್ ಜಾರಿ ಮಾಡಿದ್ದಾರೆ.