
ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಸಚಿವೆ ಕೊಂಡ ಸುರೇಖಾ ಅವರನ್ನು ಸಂಪುಟದಿಂದ ವಜಾಗೊಳಿಸಲು ನಿರ್ಧರಿಸಿ, ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರಿಗೆ ಶಿಫಾರಸು ಕಳುಹಿಸಿದ್ದಾರೆ.
ಪಾರ್ಕಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸುರೇಖಾ ಅವರ ಮಗಳು ಸುಶ್ಮಿತಾ ಪಟೇಲ್, ಸಿಎಂ ರೇವಂತ್ ರೆಡ್ಡಿ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದು ಈ ಕ್ರಮಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಶಿಸ್ತು ಸಮಿತಿಯ ವರದಿ ಮತ್ತು ಹೈಕಮಾಂಡ್ ಮಟ್ಟದ ಸುದೀರ್ಘ ಚರ್ಚೆಯ ನಂತರ, ಅರಣ್ಯ ಮತ್ತು ಧಾರ್ಮಿಕ ದತ್ತಿ ಸಚಿವೆಯಾಗಿದ್ದ ಕೊಂಡ ಸುರೇಖಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.