
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರ ಪಡೆಯಲು ಅಧಿಕಾರಿಗಳ ನಕಲಿ ಸಹಿ ಬಳಸಿ ವಂಚಿಸುವ ಮತ್ತಷ್ಟು ಪ್ರಕರಣಗಳು ಬಿಡದಿಯಲ್ಲಿ ಬೆಳಕಿಗೆ ಬಂದಿವೆ.
ಅರಳಾಳುಸಂದ್ರ ಹಾಗೂ ಹೊಸೂರು ಗ್ರಾಮಗಳ ಜಮೀನುಗಳಿಗೆ ಸಂಬಂಧಿಸಿದಂತೆ ಸಿದ್ದರಾಜು, ರಾಮಕೃಷ್ಣ ಹಾಗೂ ಗಿರಿಜಾ ಎಂಬುವವರು ನಕಲಿ ವಂಶವೃಕ್ಷ ಹಾಗೂ ಒಪ್ಪಿಗೆ ಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.
ಜಿಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಸಂತೋಷ್ ಕುಮಾರ್ ಹಾಗೂ ಕೃಷ್ಣ ಕಳಸ ಅವರು ಬಿಡದಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.