
ಬಿಡದಿ ರೈತರ ಭೂಮಿಯನ್ನು ಕಸಿದುಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೈಸ್ ಕಂಪನಿಯು ಯೋಜನೆಗೆ ಒಂದು ರೂಪಾಯಿ ಹೂಡಿಕೆ ಮಾಡಿಲ್ಲ ಎಂದು ಆರೋಪಿಸಿದ ಅವರು, ಈ ಪ್ರಕರಣದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ.
2006-07ರ ಬಿಡದಿ ವಿಚಾರದಲ್ಲಿ ಕಾಗೋಡು ತಿಮ್ಮಪ್ಪ ನೇತೃತ್ವದ ಸತ್ಯಶೋಧನಾ ಸಮಿತಿಯ ವರದಿಯನ್ನು ಪರಿಶೀಲಿಸುವಂತೆ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಸೂಚಿಸಿದ್ದಾರೆ.