
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಇಂದು ಬಿಎಸ್ಇ ಮತ್ತು ಎನ್ಎಸ್ಇ ಷೇರು ಮಾರುಕಟ್ಟೆ ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಬೆಂಗಳೂರು ಮತ್ತು ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಬ್ಯಾಂಕ್ಗಳಿಗೆ ರಜೆ ಘೋಷಿಸಲಾಗಿದೆ.
ಬ್ಯಾಂಕ್ ಶಾಖೆಗಳು ಮುಚ್ಚಿದ್ದರೂ ಯುಪಿಐ, ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಎಟಿಎಂ ಸೇವೆಗಳು ಎಂದಿನಂತೆ 24 ಗಂಟೆಯೂ ಗ್ರಾಹಕರಿಗೆ ಲಭ್ಯವಿರುತ್ತವೆ.
ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ಬೆಳಗಿನ ಅವಧಿಯಲ್ಲಿ ಮುಚ್ಚಿರಲಿದ್ದು, ಸಂಜೆ 5 ಗಂಟೆಯ ನಂತರ ವಹಿವಾಟು ಪುನರಾರಂಭಗೊಳ್ಳಲಿದೆ.