
ಕಂಪ್ಲಿಯ ಸಾಹಿತ್ಯ ಸಿರಿ ಪ್ರತಿಷ್ಠಾನದ ಆಶ್ರಯದಲ್ಲಿ ಆಗಸ್ಟ್ 22ರಂದು ಸಂಜೆ 5 ಗಂಟೆಗೆ ಶ್ರೀವಾಸವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮಳೆ’ ಕವಿಗೋಷ್ಠಿ ಆಯೋಜಿಸಲಾಗಿದೆ.
ಬಳ್ಳಾರಿಯ ಉಪನ್ಯಾಸಕ ಯು. ಶ್ರೀನಿವಾಸಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಶ್ರೀವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ. ರಾಜಾರಾವು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು 98869 40339 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.