
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 4 ಓವರ್ಗಳಲ್ಲಿ 16 ನೀಡಿ 1 ವಿಕೆಟ್ ಪಡೆದಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದಿಂದಾಗಿ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ.
ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ರಿಹ್ಯಾಬ್ ಮುಗಿಸಿ ಎರಡು ತಿಂಗಳ ಬಳಿಕ ತಂಡಕ್ಕೆ ಮರಳಿದ್ದ ವರುಣ್, ಕೇವಲ ಒಂದು ಪಂದ್ಯ ಆಡುವಷ್ಟರಲ್ಲಿ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ.
ಇವರ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದ್ದು, ಅವರು ಭಾರತದ ಪರ ಇದುವರೆಗೆ 49 ಪಂದ್ಯಗಳಲ್ಲಿ 67 ವಿಕೆಟ್ ಪಡೆದಿದ್ದಾರೆ.